ಭ್ರಷ್ಟ ಆಡಳಿತ ವ್ಯವಸ್ಥೆ ಸರಿಪಡಿಸಲು ಕೆಚ್ಚೆದೆಯ ಹೋರಾಟ ಮಾಡಿದ ಕ್ರಾಂತಿಕಾರಿ ಕವಿ ಗದ್ದರ್: -ಕಜಾಪ ಅಧ್ಯಕ್ಷ ಕೆ.ವೆಂಕಟೇಶ್

ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ‌ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.

ಅನ್ಯಾಯ, ಮೋಸ, ಗೊಡ್ಡು ಸಂಪ್ರದಾಯಗಳಿಂದ ಕೂಡಿರುವ ಸಮಾಜ, ಜನರಿಗೆ ಉಪಯೋಗಕ್ಕೆ ಬಾರದ ವ್ಯವಸ್ಥೆಯನ್ನು ಬದಲಾಯಿಸಲು ಹೋರಾಟ, ಚಳವಳಿ ಅತ್ಯಗತ್ಯ, ಆದರೆ ಪ್ರಸ್ತುತ ದಿನಗಳಲ್ಲಿ ಜನರು ಚಳವಳಿ, ಹೋರಾಟಗಳಿಂದ ಹಿಂದೆ ಸರಿದಿರುವುದು ವಿಪರ್ಯಾಸ ಎಂದು ವಿಷಾದ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.

ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್ ಮಾತನಾಡಿ ಹಲವು ವರ್ಷಗಳ ಹಿಂದೆ ತಾಲ್ಲೂಕಿನ ಹಲವು ಪ್ರಗತಿ ಪರ ಸಂಘಟನೆಗಳು ಹೈದರಾಬಾದ್ ನಲ್ಲಿ ಗದ್ದರ್ ಅವರನ್ನು ಭೇಟಿಯಾಗಿದ್ದೇವು. ಅಂದಿನ ಜೀತ ಪದ್ದತಿ, ತುಳಿತಕ್ಕೊಳದ ಜನತೆ, ಸಣ್ಣ ಹಿಡುವಳಿದಾರರ ಪರವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದರು. ಗದ್ದರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಶ್ನಿಸುವ ಮನೋಭಾವ ತನ್ನಿಂತಾನೆ ನಮ್ಮಲ್ಲಿ ಬೆಳೆಯುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago