ಠಾಣೆ ವಶದಲ್ಲಿದ್ದ ವಾಹನ ಬಿಡುಗಡೆಗೆ 40 ಸಾವಿರ ರೂ. ಲಂಚ ಪಡೆದ ಆರೋಪದ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಬೆಳಗಿನ ಜಾವ ವಶಕ್ಕೆ ಪಡೆದಿದ್ದಾರೆ.
ವಾಹನ ಬಿಡುಗಡೆ ಮಾಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 40 ಸಾವಿರ ಹಣವನ್ನು ಕ್ಯಾತ್ಸಂದ್ರ ಬಳಿಯ ಹೋಟೆಲ್ ಸಿಬ್ಬಂದಿಯೊಬ್ಬರಿಗೆ ನೀಡುವಂತೆ ವಾಹನ ಮಾಲೀಕರಿಗೆ ಚೇತನ್ ತಿಳಿಸಿದ್ದರು. ಈ ಕುರಿತು ವಾಹನ ಮಾಲೀಕರು ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಶುಕ್ರವಾರ ರಾತ್ರಿ ಕ್ಯಾತ್ಸಂದ್ರದ ಹೋಟೆಲ್ ಸಿಬ್ಬಂದಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪಿಎಸ್ಐ ಚೇತನ್ ಬಗ್ಗೆ ಹೇಳಿದ್ದಾರೆ.
ಶನಿವಾರ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ಚೇತನ್ ಅವರನ್ನು ಬಂಧಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…