ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ ವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಡೆದ ‘ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಬಗ್ಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಣೆ ತಡೆ, ಭ್ರೂಣ ಹತ್ಯೆ ತಡೆ, ಬಾಲ್ಯ ವಿವಾಹ ತಡೆ, ಹೆಣ್ಣು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಇಂತಹ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರಬೇಕು. ಸಾರ್ವಜನಿಕರು ಕೂಡ ಯಾವುದೇ ಮೂಡನಂಬಿಕೆ ಅಥವಾ ಆಸೆ ಆಮಿಷಗಳಿಗೆ ಒಳಗಾಗದೆ ಮಕ್ಕಳ ರಕ್ಷಣೆ, ಭ್ರೂಣ ಹತ್ಯೆಗಳನ್ನು ತಡೆಯಬೇಕು. ಭ್ರೂಣ ಹತ್ಯೆ, ಬಾಲ್ಯ ವಿವಾಹ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳು ನಡೆಸಿದಲ್ಲಿ ಅಂತವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾನವ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು. ಮಾನವ ಕಳ್ಳಸಾಗಣೆ, ಭ್ರೂಣ ಹತ್ಯೆ ಇವುಗಳಿಂದ ಜಿಲ್ಲೆಯನ್ನು ಮುಕ್ತ ಗೊಳಿಸಬೇಕು. ಇದಕ್ಕಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ನೆಲಮಂಗಲ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಸೋನಿಯಾ ಅವರು ಮಾತನಾಡಿ, ಪ್ರಸಕ್ತ ವರ್ಷದ ಕರ್ನಾಟಕದಲ್ಲಿ 1000 ಪುರುಷರಿಗೆ 973 ಸ್ತ್ರೀಯರು ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1000 ಪುರುಷರಿಗೆ 946 ಸ್ತ್ರೀಯರ ಸಂಖ್ಯೆವಿದೆ. ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಾವಸ್ಥೆಯ ಮಹಿಳೆಯರು ತಮ್ಮ ಮಗುವಿನ ಬೆಳವಣಿಗೆ ಬಗ್ಗೆ ಮಾತ್ರ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಾಗಾರದಲ್ಲಿ ವಕೀಲರಾದ ಮಹೇಶ್ ದಾಸ್ ಮಾತನಾಡಿ, ಭ್ರೂಣಲಿಂಗ ಹತ್ಯೆ ತಡೆಗಟ್ಟಲು 1988 ರಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. ಈ ಭ್ರೂಣಲಿಂಗ ಹತ್ಯೆ ಮಾಡುವದು ಶಿಕ್ಷಾರ್ಹ ಅಪರಾಧವಾಗಿದ್ದು, ಮೊದಲ ಪ್ರಕರಣದ ವೈದ್ಯರಿಗೆ 10 ಸಾವಿರ ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆವಿದೆ. ಹೆಣ್ಣು-ಗಂಡು ಮಗು ಎನ್ನುವ ತಾರತಮ್ಯ ಬಿಟ್ಟು, ಪ್ರತಿಯೊಬ್ಬರೂ ಹೆಣ್ಣು ಭ್ರೂಣ ಹತ್ಯೆ ತಡೆಯುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿನಿಯರ್ ಸ್ಪೆಷಲೀಸ್ಟ್ ಇನ್ ಪಾಟ್ನರ್ಸ್ ವಿಹಾನ್ ಸಂಸ್ಥೆಯ ರೋವಿನ ಬಾಸ್ಟೀನ್ ಅವರು ಮಾತನಾಡಿ ಇತ್ತಿಚಿನ ದಿನಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಚಟುವಟಿಕೆಗಳು ವಿಪರೀತವಾಗಿ ನಡೆಯುತ್ತಿವೆ. ಜನರ ಬಡತನ, ಆರ್ಥಿಕ ಪರಿಸ್ಥಿತಿಯನ್ನು ಗುರಿಯಾಗಿಸಿಕೊಂಡು ಹುಡುಗಿಯರು ಹಾಗೂ ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡುವುದು ಕಂಡು ಬರುತ್ತಿದೆ. ಸಮಾಜದಲ್ಲಿನ ಬಡತನ ನಿರ್ಮೂಲನೆ, ಹೆಣ್ಣು ಶೋಷಣೆ, ಲಿಂಗ ಅಸಮಾನತೆಯನ್ನು ನಿರ್ಮೂಲನೆ ಮತ್ತು ಸಾರ್ವಜನಿಕರು ಜಾಗೃತಿ ವಹಿಸುವುದಿಂದ ಮಾನವ ಕಳ್ಳ ಸಾಗಾಣಿಕೆ ತಡೆಯಬಹುದೆಂದು ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ. ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮೀ ಎಸ್‌, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುನೀಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago