Categories: ಮಂಗಳೂರು

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಬಜಪೆ ಕಿನ್ನಿಪದವು ಸಮೀಪ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಬರ್ಭರವಾಗಿ
ಹತ್ಯೆ ಮಾಡಲಾಗಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದ.

ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ‘ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಶಾಂತ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದರು.

ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!
ಇನ್ನು ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ಅಟ್ಟಾಡಿಸಿ ಕೊಲೆಗೈದ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವನ್ನು ಬಿಜೆಪಿ ನಾಯಕ ಸುನಿಲ್ ಕುಮಾರ್ ಕಾರ್ಕಳ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

4 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

5 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

10 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

11 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

15 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

16 hours ago