Categories: ಪರಿಸರ

ಮಂಗಳೂರಿನ ಸಸಿಹಿತ್ತಲಿನಲ್ಲಿ ಕಂಡುಬಂದ ಅಪರೂಪದ ಆಲಿವ್ ರಿಡ್ಲಿ ಆಮೆಗಳು: 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ

 

ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.

ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.

ಆಲಿವ್ ರಿಡ್ಲಿ ಆಮೆಗಳ ಪರಿಚಯ

ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.

ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.

ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.

ಒಮ್ಮೆ ಈ ಆಮೆ 100 ಕ್ಕೂ ಹೆಚ್ಚು ಮೊಟ್ಟೆಗಳನ್ನು ಇಡುತ್ತದೆ.  ಆದರೆ ಇತ್ತೀಚಿನ ದಿನಗಳಲ್ಲಿ ಈ ಆಮೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ವಿನಾಶದ ಅಂಚಿನಲ್ಲಿವೆ.  ಹೀಗಾಗಿ ಅವುಗಳನ್ನು ಸಂರಕ್ಷಿಸಲು ಸರ್ಕಾರ ಯೋಜನೆ ರೂಪಿಸಿದೆ.

ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

5 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

6 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

9 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

9 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

18 hours ago