Categories: ಪರಿಸರ

ಮಂಗಳೂರಿನ ಸಸಿಹಿತ್ತಲಿನಲ್ಲಿ ಕಂಡುಬಂದ ಅಪರೂಪದ ಆಲಿವ್ ರಿಡ್ಲಿ ಆಮೆಗಳು: 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ

 

ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.

ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.

ಆಲಿವ್ ರಿಡ್ಲಿ ಆಮೆಗಳ ಪರಿಚಯ

ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.

ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.

ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.

ಒಮ್ಮೆ ಈ ಆಮೆ 100 ಕ್ಕೂ ಹೆಚ್ಚು ಮೊಟ್ಟೆಗಳನ್ನು ಇಡುತ್ತದೆ.  ಆದರೆ ಇತ್ತೀಚಿನ ದಿನಗಳಲ್ಲಿ ಈ ಆಮೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ವಿನಾಶದ ಅಂಚಿನಲ್ಲಿವೆ.  ಹೀಗಾಗಿ ಅವುಗಳನ್ನು ಸಂರಕ್ಷಿಸಲು ಸರ್ಕಾರ ಯೋಜನೆ ರೂಪಿಸಿದೆ.

ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

10 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

11 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

11 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

11 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

13 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

15 hours ago