Categories: ಪರಿಸರ

ಮಂಗಳೂರಿನ ಸಸಿಹಿತ್ತಲಿನಲ್ಲಿ ಕಂಡುಬಂದ ಅಪರೂಪದ ಆಲಿವ್ ರಿಡ್ಲಿ ಆಮೆಗಳು: 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ

 

ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.

ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.

ಆಲಿವ್ ರಿಡ್ಲಿ ಆಮೆಗಳ ಪರಿಚಯ

ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.

ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.

ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.

ಒಮ್ಮೆ ಈ ಆಮೆ 100 ಕ್ಕೂ ಹೆಚ್ಚು ಮೊಟ್ಟೆಗಳನ್ನು ಇಡುತ್ತದೆ.  ಆದರೆ ಇತ್ತೀಚಿನ ದಿನಗಳಲ್ಲಿ ಈ ಆಮೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ವಿನಾಶದ ಅಂಚಿನಲ್ಲಿವೆ.  ಹೀಗಾಗಿ ಅವುಗಳನ್ನು ಸಂರಕ್ಷಿಸಲು ಸರ್ಕಾರ ಯೋಜನೆ ರೂಪಿಸಿದೆ.

ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

9 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

14 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago