ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.
ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.
ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.
ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.
ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.
ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…