Categories: ಪರಿಸರ

ಮಂಗಳೂರಿನ ಸಸಿಹಿತ್ತಲಿನಲ್ಲಿ ಕಂಡುಬಂದ ಅಪರೂಪದ ಆಲಿವ್ ರಿಡ್ಲಿ ಆಮೆಗಳು: 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ

 

ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.

ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.

ಆಲಿವ್ ರಿಡ್ಲಿ ಆಮೆಗಳ ಪರಿಚಯ

ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.

ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.

ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.

ಒಮ್ಮೆ ಈ ಆಮೆ 100 ಕ್ಕೂ ಹೆಚ್ಚು ಮೊಟ್ಟೆಗಳನ್ನು ಇಡುತ್ತದೆ.  ಆದರೆ ಇತ್ತೀಚಿನ ದಿನಗಳಲ್ಲಿ ಈ ಆಮೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ವಿನಾಶದ ಅಂಚಿನಲ್ಲಿವೆ.  ಹೀಗಾಗಿ ಅವುಗಳನ್ನು ಸಂರಕ್ಷಿಸಲು ಸರ್ಕಾರ ಯೋಜನೆ ರೂಪಿಸಿದೆ.

ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

60 minutes ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 hour ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

18 hours ago