ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.
ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.
ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.
ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.
ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.
ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…