ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ ಸೇರಿದವು. ನಿರಂತರ ನಿಗಾವಹಿಸಿ ಇಂದು ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಿದ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ.
ಆಲಿವ್ ರಿಡ್ಲಿ ಆಮೆಗಳನ್ನ ಸಾಮಾನ್ಯವಾಗಿ ಪೆಸಿಫಿಕ್ ರಿಡ್ಲಿ ಸಮುದ್ರ ಆಮೆಗಳು ಎಂದೂ ಕರೆಯಲಾಗುತ್ತದೆ, ಇದು ಚೆಲೋನಿಡೆ ಜಾತಿಯ ಕುಟುಂಬಕ್ಕೆ ಸೇರಿದೆ ಎನ್ನಲಾಗಿದೆ.
ಆಲಿವ್ ರಿಡ್ಲಿ ಆಮೆಗಳು ಅಟ್ಲಾಂಟಿಕ್, ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರದಲ್ಲಿ ಉಷ್ಣವಲಯದ ಪ್ರದೇಶಗಳಲ್ಲಿ ಮತ್ತು ಅಟ್ಲಾಂಟಿಕ್ ಮಹಾಸಾಗರದಲ್ಲಿ, ಅವು ಪಶ್ಚಿಮ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕಾದ ಕರಾವಳಿಯಲ್ಲಿ ಕಂಡುಬರುತ್ತವೆ.
ಕರ್ನಾಟಕದ ಕಡಲತೀರ ಪ್ರದೇಶದಲ್ಲಿ ಮೂರು ಪ್ರಬೇಧದ ಆಮೆಗಳನ್ನ ನಾವು ಕಾಣಬಹುದಾಗಿದೆ. ಗ್ರೀನ್ ಟರ್ಟಲ್, ಹಾಕ್ ಬಿಲ್ಡ್, ಆಲಿವ್ ರಿಡ್ಲೆ ಹೀಗೆ ಮೂರು ಪ್ರಬೇಧಗಳಿವೆ.
ಇದರಲ್ಲಿ ಆಲಿವ್ ರಿಡ್ಲಿ ಆಮೆಯು ಉತ್ತರ ಕನ್ನಡ ಜಿಲ್ಲೆಯ ಕಡಲತೀರವನ್ನು ತನ್ನ ಸಂತಾನವೃದ್ಧಿ ಸ್ಥಳವಾಗಿ ಆರಿಸಿಕೊಂಡಿದೆ. ಮುಖ್ಯವಾಗಿ ಈ ಆಮೆಗಳು ಜನವರಿಯಿಂದ ಮಾರ್ಚ್ ವರೆಗೆ ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಹುಣ್ಣಿಮೆಯ ಬೆಳಕಲ್ಲಿ ನಿಶ್ಯಬ್ಧ ಕಡಲತೀರದ ಪ್ರದೇಶಕ್ಕೆ ಬಂದು ಮರಳಿನಲ್ಲಿ ಗೂಡು ಕಟ್ಟಿ ಮೊಟ್ಟೆ ಇಟ್ಟು ಮತ್ತೆ ಗೂಡನ್ನು ಮುಚ್ಚಿ ಸಮುದ್ರಕ್ಕೆ ವಾಪಸಾಗುತ್ತಾ ಬಂದ ದಾರಿಯನ್ನೇ ಅಳಿಸಿಬಿಡುತ್ತವೆ.
ಈ ಆಮೆಗಳ ಪ್ರಾಮುಖ್ಯತೆ ಎಂದರೆ, ಅವು ಸಮುದ್ರದ ಆಹಾರ ಸರಪಳಿಯನ್ನು ಭದ್ರಪಡಿಸುತ್ತವೆ. ಅನುಪಯುಕ್ತ ಜೆಲ್ಲಿ ಮೀನುಗಳನ್ನು ತಿನ್ನುವುದರಿಂದ ಮೀನುಗಾರರಿಗೆ ಮೀನು ಸಂತಾನೋತ್ಪತ್ತಿಯಲ್ಲಿ ಬಹಳ ಉಪಯುಕ್ತ ಪಾತ್ರವನ್ನು ವಹಿಸುತ್ತವೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…