ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಅವರ ಸಾವು ಶಾರ್ಟ್ ಸರ್ಕ್ಯೂಟ್ನಿಂದಾದ ಬೆಂಕಿ ಅವಘಡವೆಂದು ಆರಂಭದಲ್ಲಿ ಶಂಕಿಸಲಾಗಿತ್ತು.
ಆದರೆ, ಪೊಲೀಸ್ ತನಿಖೆಯು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಬಹಿರಂಗಪಡಿಸಿದ್ದು, ಈ ಸಂಬಂಧ ಆಕೆಯ ಪ್ರಿಯಕರ, ಕೇರಳ ಮೂಲದ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.
ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ದೊರೆತಿದೆ.
ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್ನಲ್ಲಿ ವಾಸವಿದ್ದರು.
ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.
ಶರ್ಮಿಳಾ ಯಾರು?
ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.
ಘಟನೆ ಹೇಗಿತ್ತು….?
ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ, ಮನೆಯ ಒಂದು ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು.
ಬೆಂಕಿ ಕಾಣಿಸಿಕೊಂಡ ಕೂಡಲೇ ಶರ್ಮಿಳಾ ಆ ಕೋಣೆಯತ್ತ ತೆರಳಲು ಯತ್ನಿಸಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.
ಕತ್ತಲೆ ಮತ್ತು ದಟ್ಟ ಹೊಗೆಯಿಂದಾಗಿ ಕಿಟಕಿ ಅಥವಾ ಬಾಗಿಲು ತೆರೆಯಲು ಸಾಧ್ಯವಾಗದೆ, ಶರ್ಮಿಳಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿತ್ತು.
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…