ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಅವರ ಸಾವು ಶಾರ್ಟ್ ಸರ್ಕ್ಯೂಟ್ನಿಂದಾದ ಬೆಂಕಿ ಅವಘಡವೆಂದು ಆರಂಭದಲ್ಲಿ ಶಂಕಿಸಲಾಗಿತ್ತು.
ಆದರೆ, ಪೊಲೀಸ್ ತನಿಖೆಯು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಬಹಿರಂಗಪಡಿಸಿದ್ದು, ಈ ಸಂಬಂಧ ಆಕೆಯ ಪ್ರಿಯಕರ, ಕೇರಳ ಮೂಲದ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.
ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ದೊರೆತಿದೆ.
ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್ನಲ್ಲಿ ವಾಸವಿದ್ದರು.
ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.
ಶರ್ಮಿಳಾ ಯಾರು?
ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.
ಘಟನೆ ಹೇಗಿತ್ತು….?
ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ, ಮನೆಯ ಒಂದು ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು.
ಬೆಂಕಿ ಕಾಣಿಸಿಕೊಂಡ ಕೂಡಲೇ ಶರ್ಮಿಳಾ ಆ ಕೋಣೆಯತ್ತ ತೆರಳಲು ಯತ್ನಿಸಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.
ಕತ್ತಲೆ ಮತ್ತು ದಟ್ಟ ಹೊಗೆಯಿಂದಾಗಿ ಕಿಟಕಿ ಅಥವಾ ಬಾಗಿಲು ತೆರೆಯಲು ಸಾಧ್ಯವಾಗದೆ, ಶರ್ಮಿಳಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…