ಮಂಗಳೂರು ಟೆಕ್ಕಿ ಉಸಿರುಗಟ್ಟಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಆರೋಪಿ ಅರೆಸ್ಟ್

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಅವರ ಸಾವು ಶಾರ್ಟ್ ಸರ್ಕ್ಯೂಟ್‌ನಿಂದಾದ ಬೆಂಕಿ ಅವಘಡವೆಂದು ಆರಂಭದಲ್ಲಿ ಶಂಕಿಸಲಾಗಿತ್ತು.

ಆದರೆ, ಪೊಲೀಸ್ ತನಿಖೆಯು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಬಹಿರಂಗಪಡಿಸಿದ್ದು, ಈ ಸಂಬಂಧ ಆಕೆಯ ಪ್ರಿಯಕರ, ಕೇರಳ ಮೂಲದ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.

ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ದೊರೆತಿದೆ.

ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸವಿದ್ದರು.

ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.

ಶರ್ಮಿಳಾ ಯಾರು?

ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.

ಘಟನೆ ಹೇಗಿತ್ತು….?

ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ, ಮನೆಯ ಒಂದು ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು.

ಬೆಂಕಿ ಕಾಣಿಸಿಕೊಂಡ ಕೂಡಲೇ ಶರ್ಮಿಳಾ ಆ ಕೋಣೆಯತ್ತ ತೆರಳಲು ಯತ್ನಿಸಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.

ಕತ್ತಲೆ ಮತ್ತು ದಟ್ಟ ಹೊಗೆಯಿಂದಾಗಿ ಕಿಟಕಿ ಅಥವಾ ಬಾಗಿಲು ತೆರೆಯಲು ಸಾಧ್ಯವಾಗದೆ, ಶರ್ಮಿಳಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿತ್ತು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

5 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago