ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಅವರ ಸಾವು ಶಾರ್ಟ್ ಸರ್ಕ್ಯೂಟ್ನಿಂದಾದ ಬೆಂಕಿ ಅವಘಡವೆಂದು ಆರಂಭದಲ್ಲಿ ಶಂಕಿಸಲಾಗಿತ್ತು.
ಆದರೆ, ಪೊಲೀಸ್ ತನಿಖೆಯು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಬಹಿರಂಗಪಡಿಸಿದ್ದು, ಈ ಸಂಬಂಧ ಆಕೆಯ ಪ್ರಿಯಕರ, ಕೇರಳ ಮೂಲದ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.
ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ದೊರೆತಿದೆ.
ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್ನಲ್ಲಿ ವಾಸವಿದ್ದರು.
ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.
ಶರ್ಮಿಳಾ ಯಾರು?
ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.
ಘಟನೆ ಹೇಗಿತ್ತು….?
ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ, ಮನೆಯ ಒಂದು ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು.
ಬೆಂಕಿ ಕಾಣಿಸಿಕೊಂಡ ಕೂಡಲೇ ಶರ್ಮಿಳಾ ಆ ಕೋಣೆಯತ್ತ ತೆರಳಲು ಯತ್ನಿಸಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.
ಕತ್ತಲೆ ಮತ್ತು ದಟ್ಟ ಹೊಗೆಯಿಂದಾಗಿ ಕಿಟಕಿ ಅಥವಾ ಬಾಗಿಲು ತೆರೆಯಲು ಸಾಧ್ಯವಾಗದೆ, ಶರ್ಮಿಳಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿತ್ತು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…