Categories: Crime

ಮಂಚಕ್ಕೆ ಕರೀತಿದ್ದ ಆಂಟಿ.. ವಿಡಿಯೋ ಮಾಡ್ತಿದ್ದ ಗಂಡ….! 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ: 150ಕ್ಕೂ ಹೆಚ್ಚು ಮಂದಿಯನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಕೋಟಿ ಕೋಟಿ ಹಣ ಸುಲಿಗೆ

ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುತ್ತಾ ಯುವಕರು, ಪುರುಷರನ್ನು ಸೆಳೆದು ಹನಿಟ್ರ್ಯಾಪ್​ ಮಾಡ್ತಿದ್ದ ಜಾಲವೊಂದನ್ನು ಕರೀಂನಗರ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದು, ವಿಡಿಯೋ, ಫೋಟೋ ಮಾಡಿಕೊಂಡು ಬ್ಲಾಕ್​ಮೇಲ್ ಮಾಡಿ ಹಣ ಪೀಕುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.

ಸಾಮಾನ್ಯವಾಗಿ ತನ್ನ ಪತ್ನಿಯನ್ನು ಪರಪುರುಷ ಕೆಟ್ಟದಾಗಿ ನೋಡಿದರೇ ಪತಿ ಸಹಿಸುವುದಿಲ್ಲ. ಇಂತಹ ಸಾಕಷ್ಟು ಜಗಳು ತಾರಕಕ್ಕೇರಿ ಕೊ*ಲೆಯಲ್ಲಿ ಅಂತ್ಯವಾಗಿರುವುದನ್ನೂ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ಪತಿರಾಯ ಪತ್ನಿಯನ್ನ ಮುಂದಿಟ್ಟುಕೊಂಡು ಮಾಡಿದ್ದು ಮಾತ್ರ ಘನಘೋರ ಕೃತ್ಯ.

ಪತ್ನಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಆಕರ್ಷಕ ಫೋಟೋಗಳನ್ನು ಪೋಸ್ಟ್ ಮಾಡಿ ಯುವಕರು ಮತ್ತು ಉದ್ಯಮಿಗಳಿಗೆ ಬಲೆ ಬೀಸುತ್ತಿದ್ದಳು. ಸ್ವಲ್ಪ ಕ್ಲೋಸ್ ಆಗ್ತಿದ್ದಂತೆ ಲೈಂಗಿಕ ಕ್ರಿಯೆಗೆ ಆಹ್ವಾನಿಸುತ್ತಿದ್ದಳು. ಹೆಂಡ್ತಿ ಬೇರೊಬ್ಬನ ಜೊತೆ ಮಂಚದ ಮೇಲಿದ್ರೆ, ಗಂಡ ಆ ವಿಡಿಯೋಗಳನ್ನ ರೆಕಾರ್ಡ್ ಮಾಡಿಕೊಳ್ತಿದ್ದ. ಹೀಗೆ ದಂಪತಿ ಕಳೆದ ಮೂರು ವರ್ಷಗಳಿಂದ 150ಕ್ಕೂ ಹೆಚ್ಚು ಯುವಕರು, ಉದ್ಯಮಿಗಳು,ವಿದ್ಯಾರ್ಥಿಗಳಿಗೆ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ  3 ಕೋಟಿ ರೂ.ಗೂ ಅಧಿಕ ಹಣ ಸುಲಿಗೆ ಮಾಡಿದ್ದಾರೆ.

ಆಂಧ್ರ ಪ್ರದೇಶದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ದಂಧೆ ಬಯಲಾಗಿದ್ದು,ವಂಚಕ ಗಂಡ ಹೆಂಡ್ತಿ ಈಗ ಜೈಲಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಂಟೆ ಮೆಸೇಜ್ ಬಂತು ಅಂತ ಹೋದ್ರೆ ಬಕ್ರಾ ಆಗ್ತೀರಿ ಹುಷಾರ್.

ತೆಲಂಗಾಣದ ಮಂಚೇರಿಯಲ್ ಮೂಲದ ಈ ದಂಪತಿ ಮಾರ್ಬಲ್ ಮತ್ತು ಇಂಟೇರಿಯರ್ ಕೆಲಸದಲ್ಲಿ ನಷ್ಟ ಅನುಭವಿಸಿದ ಬಳಿಕ ಸುಲಭವಾಗಿ ಹಣಗಳಿಸುವ ಸಲುವಾಗಿ ದಂಧೆಗೆ ಇಳಿದಿದ್ದಾರೆ. ಮಂಚೇರಿಯಲ್​ನಿಂದ ಕರೀಂನಗರಕ್ಕೆ ಸ್ಥಳಾಂತರಗೊಂಡ ಬಳಿಕ ದಂಪತಿ ಅರೆಪಲ್ಲಿಯಲ್ಲಿರುವ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಾಗಿದ್ದರು.

ಈ ವೇಳೆ ಪತ್ನಿಗೆ ಇನ್​ಸ್ಟಾಗ್ರಾಂ ಮೂಲಕ ರೀಲ್ಸ್ ಮಾಡುತ್ತಾ, ಯುವಕರನ್ನು, ಉದ್ಯಮಿಗಳನ್ನು ಪರಿಚಯ ಮಾಡಿಕೊಂಡು, ಅವರ ಜೊತೆ ಸಂಬಂಧ ಬೆಳೆಸಲು ಪತಿಯೇ ನೆರವಾಗಿದ್ದಾನೆ. ಪತ್ನಿಯ ಅರೆನಗ್ನ ಫೋಟೋ ಗಳನ್ನು ಫೇಜ್​ಗಳಲ್ಲಿ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ.

ದಂಪತಿಗಳು ಹೀಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ ನಡೆಸಿದ್ರೆ, ಪತಿ ಅದನ್ನು ಸೆರೆ ಹಿಡಿದು ಬ್ಲಾಕ್​ಮೇಲ್ ಮಾಡಿ ಹಣ ಸಂಗ್ರಹಿಸಿದ್ದಾರೆ. ಓರ್ವ ವ್ಯಕ್ತಿಯಿಂದ ಸುಮಾರು 12 ಲಕ್ಷ ರೂ.ಗಳನ್ನು ಪೀಕಿದ್ದು, ಅದರಿಂದ ಕಾರು, ರೆಫ್ರಿಜರೇಟರ್, ಹವಾನಿಯಂತ್ರಣ, ಸೋಫಾ ಮತ್ತು ಇತರ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದ್ದಾರೆ.

ಬಳಿಕ ಅದೇ ವ್ಯಕ್ತಿ ಮತ್ತೆ 5 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ್ದಾರೆ. ಆಗ ಜೀವ ಭಯದಿಂದ ಆ ವ್ಯಕ್ತಿ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ ಕರೀಂನಗರ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದಂಪತಿಯನ್ನು ಬಂಧಿಸಿದ್ದು, ಅವರಿಂದ ಕಾರು, ಹಣ, ಮೊಬೈಲ್ ಹಾಗೂ ಖಾಲಿ ಚೆಕ್​ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಮೂರನೇ ಮಹಡಿ ಮೇಲಿಂದ ತಳ್ಳಿ ತಾಯಿಯ ಜೀವ ತೆಗೆದ ಪಾಪಿ ಮಗ

ಮಗನಿಂದಲೇ ತಾಯಿ ಕೊಲೆಯಾಗಿರುವ ಘಟನೆ‌ ಇಂದು ಮಧ್ಯಾಹ್ನ ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ... ಮೂರನೇ…

6 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…

7 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ-‌ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…

10 hours ago

ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…

11 hours ago

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ: ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವು

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…

14 hours ago