Categories: Crime

ಮಂಚಕ್ಕೆ ಕರೀತಿದ್ದ ಆಂಟಿ.. ವಿಡಿಯೋ ಮಾಡ್ತಿದ್ದ ಗಂಡ….! 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ: 150ಕ್ಕೂ ಹೆಚ್ಚು ಮಂದಿಯನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಕೋಟಿ ಕೋಟಿ ಹಣ ಸುಲಿಗೆ

ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುತ್ತಾ ಯುವಕರು, ಪುರುಷರನ್ನು ಸೆಳೆದು ಹನಿಟ್ರ್ಯಾಪ್​ ಮಾಡ್ತಿದ್ದ ಜಾಲವೊಂದನ್ನು ಕರೀಂನಗರ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದು, ವಿಡಿಯೋ, ಫೋಟೋ ಮಾಡಿಕೊಂಡು ಬ್ಲಾಕ್​ಮೇಲ್ ಮಾಡಿ ಹಣ ಪೀಕುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.

ಸಾಮಾನ್ಯವಾಗಿ ತನ್ನ ಪತ್ನಿಯನ್ನು ಪರಪುರುಷ ಕೆಟ್ಟದಾಗಿ ನೋಡಿದರೇ ಪತಿ ಸಹಿಸುವುದಿಲ್ಲ. ಇಂತಹ ಸಾಕಷ್ಟು ಜಗಳು ತಾರಕಕ್ಕೇರಿ ಕೊ*ಲೆಯಲ್ಲಿ ಅಂತ್ಯವಾಗಿರುವುದನ್ನೂ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ಪತಿರಾಯ ಪತ್ನಿಯನ್ನ ಮುಂದಿಟ್ಟುಕೊಂಡು ಮಾಡಿದ್ದು ಮಾತ್ರ ಘನಘೋರ ಕೃತ್ಯ.

ಪತ್ನಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಆಕರ್ಷಕ ಫೋಟೋಗಳನ್ನು ಪೋಸ್ಟ್ ಮಾಡಿ ಯುವಕರು ಮತ್ತು ಉದ್ಯಮಿಗಳಿಗೆ ಬಲೆ ಬೀಸುತ್ತಿದ್ದಳು. ಸ್ವಲ್ಪ ಕ್ಲೋಸ್ ಆಗ್ತಿದ್ದಂತೆ ಲೈಂಗಿಕ ಕ್ರಿಯೆಗೆ ಆಹ್ವಾನಿಸುತ್ತಿದ್ದಳು. ಹೆಂಡ್ತಿ ಬೇರೊಬ್ಬನ ಜೊತೆ ಮಂಚದ ಮೇಲಿದ್ರೆ, ಗಂಡ ಆ ವಿಡಿಯೋಗಳನ್ನ ರೆಕಾರ್ಡ್ ಮಾಡಿಕೊಳ್ತಿದ್ದ. ಹೀಗೆ ದಂಪತಿ ಕಳೆದ ಮೂರು ವರ್ಷಗಳಿಂದ 150ಕ್ಕೂ ಹೆಚ್ಚು ಯುವಕರು, ಉದ್ಯಮಿಗಳು,ವಿದ್ಯಾರ್ಥಿಗಳಿಗೆ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ  3 ಕೋಟಿ ರೂ.ಗೂ ಅಧಿಕ ಹಣ ಸುಲಿಗೆ ಮಾಡಿದ್ದಾರೆ.

ಆಂಧ್ರ ಪ್ರದೇಶದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ದಂಧೆ ಬಯಲಾಗಿದ್ದು,ವಂಚಕ ಗಂಡ ಹೆಂಡ್ತಿ ಈಗ ಜೈಲಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಂಟೆ ಮೆಸೇಜ್ ಬಂತು ಅಂತ ಹೋದ್ರೆ ಬಕ್ರಾ ಆಗ್ತೀರಿ ಹುಷಾರ್.

ತೆಲಂಗಾಣದ ಮಂಚೇರಿಯಲ್ ಮೂಲದ ಈ ದಂಪತಿ ಮಾರ್ಬಲ್ ಮತ್ತು ಇಂಟೇರಿಯರ್ ಕೆಲಸದಲ್ಲಿ ನಷ್ಟ ಅನುಭವಿಸಿದ ಬಳಿಕ ಸುಲಭವಾಗಿ ಹಣಗಳಿಸುವ ಸಲುವಾಗಿ ದಂಧೆಗೆ ಇಳಿದಿದ್ದಾರೆ. ಮಂಚೇರಿಯಲ್​ನಿಂದ ಕರೀಂನಗರಕ್ಕೆ ಸ್ಥಳಾಂತರಗೊಂಡ ಬಳಿಕ ದಂಪತಿ ಅರೆಪಲ್ಲಿಯಲ್ಲಿರುವ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಾಗಿದ್ದರು.

ಈ ವೇಳೆ ಪತ್ನಿಗೆ ಇನ್​ಸ್ಟಾಗ್ರಾಂ ಮೂಲಕ ರೀಲ್ಸ್ ಮಾಡುತ್ತಾ, ಯುವಕರನ್ನು, ಉದ್ಯಮಿಗಳನ್ನು ಪರಿಚಯ ಮಾಡಿಕೊಂಡು, ಅವರ ಜೊತೆ ಸಂಬಂಧ ಬೆಳೆಸಲು ಪತಿಯೇ ನೆರವಾಗಿದ್ದಾನೆ. ಪತ್ನಿಯ ಅರೆನಗ್ನ ಫೋಟೋ ಗಳನ್ನು ಫೇಜ್​ಗಳಲ್ಲಿ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ.

ದಂಪತಿಗಳು ಹೀಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ ನಡೆಸಿದ್ರೆ, ಪತಿ ಅದನ್ನು ಸೆರೆ ಹಿಡಿದು ಬ್ಲಾಕ್​ಮೇಲ್ ಮಾಡಿ ಹಣ ಸಂಗ್ರಹಿಸಿದ್ದಾರೆ. ಓರ್ವ ವ್ಯಕ್ತಿಯಿಂದ ಸುಮಾರು 12 ಲಕ್ಷ ರೂ.ಗಳನ್ನು ಪೀಕಿದ್ದು, ಅದರಿಂದ ಕಾರು, ರೆಫ್ರಿಜರೇಟರ್, ಹವಾನಿಯಂತ್ರಣ, ಸೋಫಾ ಮತ್ತು ಇತರ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದ್ದಾರೆ.

ಬಳಿಕ ಅದೇ ವ್ಯಕ್ತಿ ಮತ್ತೆ 5 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ್ದಾರೆ. ಆಗ ಜೀವ ಭಯದಿಂದ ಆ ವ್ಯಕ್ತಿ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ ಕರೀಂನಗರ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದಂಪತಿಯನ್ನು ಬಂಧಿಸಿದ್ದು, ಅವರಿಂದ ಕಾರು, ಹಣ, ಮೊಬೈಲ್ ಹಾಗೂ ಖಾಲಿ ಚೆಕ್​ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

12 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

22 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago