Categories: Crime

ಮಂಚಕ್ಕೆ ಕರೀತಿದ್ದ ಆಂಟಿ.. ವಿಡಿಯೋ ಮಾಡ್ತಿದ್ದ ಗಂಡ….! 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ: 150ಕ್ಕೂ ಹೆಚ್ಚು ಮಂದಿಯನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಕೋಟಿ ಕೋಟಿ ಹಣ ಸುಲಿಗೆ

ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುತ್ತಾ ಯುವಕರು, ಪುರುಷರನ್ನು ಸೆಳೆದು ಹನಿಟ್ರ್ಯಾಪ್​ ಮಾಡ್ತಿದ್ದ ಜಾಲವೊಂದನ್ನು ಕರೀಂನಗರ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದು, ವಿಡಿಯೋ, ಫೋಟೋ ಮಾಡಿಕೊಂಡು ಬ್ಲಾಕ್​ಮೇಲ್ ಮಾಡಿ ಹಣ ಪೀಕುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.

ಸಾಮಾನ್ಯವಾಗಿ ತನ್ನ ಪತ್ನಿಯನ್ನು ಪರಪುರುಷ ಕೆಟ್ಟದಾಗಿ ನೋಡಿದರೇ ಪತಿ ಸಹಿಸುವುದಿಲ್ಲ. ಇಂತಹ ಸಾಕಷ್ಟು ಜಗಳು ತಾರಕಕ್ಕೇರಿ ಕೊ*ಲೆಯಲ್ಲಿ ಅಂತ್ಯವಾಗಿರುವುದನ್ನೂ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ಪತಿರಾಯ ಪತ್ನಿಯನ್ನ ಮುಂದಿಟ್ಟುಕೊಂಡು ಮಾಡಿದ್ದು ಮಾತ್ರ ಘನಘೋರ ಕೃತ್ಯ.

ಪತ್ನಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಆಕರ್ಷಕ ಫೋಟೋಗಳನ್ನು ಪೋಸ್ಟ್ ಮಾಡಿ ಯುವಕರು ಮತ್ತು ಉದ್ಯಮಿಗಳಿಗೆ ಬಲೆ ಬೀಸುತ್ತಿದ್ದಳು. ಸ್ವಲ್ಪ ಕ್ಲೋಸ್ ಆಗ್ತಿದ್ದಂತೆ ಲೈಂಗಿಕ ಕ್ರಿಯೆಗೆ ಆಹ್ವಾನಿಸುತ್ತಿದ್ದಳು. ಹೆಂಡ್ತಿ ಬೇರೊಬ್ಬನ ಜೊತೆ ಮಂಚದ ಮೇಲಿದ್ರೆ, ಗಂಡ ಆ ವಿಡಿಯೋಗಳನ್ನ ರೆಕಾರ್ಡ್ ಮಾಡಿಕೊಳ್ತಿದ್ದ. ಹೀಗೆ ದಂಪತಿ ಕಳೆದ ಮೂರು ವರ್ಷಗಳಿಂದ 150ಕ್ಕೂ ಹೆಚ್ಚು ಯುವಕರು, ಉದ್ಯಮಿಗಳು,ವಿದ್ಯಾರ್ಥಿಗಳಿಗೆ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ  3 ಕೋಟಿ ರೂ.ಗೂ ಅಧಿಕ ಹಣ ಸುಲಿಗೆ ಮಾಡಿದ್ದಾರೆ.

ಆಂಧ್ರ ಪ್ರದೇಶದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ದಂಧೆ ಬಯಲಾಗಿದ್ದು,ವಂಚಕ ಗಂಡ ಹೆಂಡ್ತಿ ಈಗ ಜೈಲಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಂಟೆ ಮೆಸೇಜ್ ಬಂತು ಅಂತ ಹೋದ್ರೆ ಬಕ್ರಾ ಆಗ್ತೀರಿ ಹುಷಾರ್.

ತೆಲಂಗಾಣದ ಮಂಚೇರಿಯಲ್ ಮೂಲದ ಈ ದಂಪತಿ ಮಾರ್ಬಲ್ ಮತ್ತು ಇಂಟೇರಿಯರ್ ಕೆಲಸದಲ್ಲಿ ನಷ್ಟ ಅನುಭವಿಸಿದ ಬಳಿಕ ಸುಲಭವಾಗಿ ಹಣಗಳಿಸುವ ಸಲುವಾಗಿ ದಂಧೆಗೆ ಇಳಿದಿದ್ದಾರೆ. ಮಂಚೇರಿಯಲ್​ನಿಂದ ಕರೀಂನಗರಕ್ಕೆ ಸ್ಥಳಾಂತರಗೊಂಡ ಬಳಿಕ ದಂಪತಿ ಅರೆಪಲ್ಲಿಯಲ್ಲಿರುವ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಾಗಿದ್ದರು.

ಈ ವೇಳೆ ಪತ್ನಿಗೆ ಇನ್​ಸ್ಟಾಗ್ರಾಂ ಮೂಲಕ ರೀಲ್ಸ್ ಮಾಡುತ್ತಾ, ಯುವಕರನ್ನು, ಉದ್ಯಮಿಗಳನ್ನು ಪರಿಚಯ ಮಾಡಿಕೊಂಡು, ಅವರ ಜೊತೆ ಸಂಬಂಧ ಬೆಳೆಸಲು ಪತಿಯೇ ನೆರವಾಗಿದ್ದಾನೆ. ಪತ್ನಿಯ ಅರೆನಗ್ನ ಫೋಟೋ ಗಳನ್ನು ಫೇಜ್​ಗಳಲ್ಲಿ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ.

ದಂಪತಿಗಳು ಹೀಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ ನಡೆಸಿದ್ರೆ, ಪತಿ ಅದನ್ನು ಸೆರೆ ಹಿಡಿದು ಬ್ಲಾಕ್​ಮೇಲ್ ಮಾಡಿ ಹಣ ಸಂಗ್ರಹಿಸಿದ್ದಾರೆ. ಓರ್ವ ವ್ಯಕ್ತಿಯಿಂದ ಸುಮಾರು 12 ಲಕ್ಷ ರೂ.ಗಳನ್ನು ಪೀಕಿದ್ದು, ಅದರಿಂದ ಕಾರು, ರೆಫ್ರಿಜರೇಟರ್, ಹವಾನಿಯಂತ್ರಣ, ಸೋಫಾ ಮತ್ತು ಇತರ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದ್ದಾರೆ.

ಬಳಿಕ ಅದೇ ವ್ಯಕ್ತಿ ಮತ್ತೆ 5 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ್ದಾರೆ. ಆಗ ಜೀವ ಭಯದಿಂದ ಆ ವ್ಯಕ್ತಿ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ ಕರೀಂನಗರ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದಂಪತಿಯನ್ನು ಬಂಧಿಸಿದ್ದು, ಅವರಿಂದ ಕಾರು, ಹಣ, ಮೊಬೈಲ್ ಹಾಗೂ ಖಾಲಿ ಚೆಕ್​ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

9 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

13 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

13 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

15 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago