ದೊಡ್ಡಬಳ್ಳಾಪುರ: ಕರ್ನಾಟಕ ಸಂಭ್ರಮ-50ರ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿಗಳಿಗೆ ನೀಡುತ್ತಿರುವ ‘ಸುವರ್ಣ ಮಹೋತ್ಸವ ಪ್ರಶಸ್ತಿ-2024’ ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ತಾಲ್ಲೂಕಿಗೆ ಸಮೀಪದ ಯಲಹಂಕ ತಾಲ್ಲೂಕಿನ ಅದ್ದೆ ಗ್ರಾಮದ ಡಾ.ಮಂಜುನಾಥ ಅದ್ದೆ ಅವರಿಗೆ ದೊರೆತಿದೆ.
ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ ಅದ್ದೆ ಅವರು ಪತ್ರಕರ್ತರಾಗಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದು, ಇವರು ಬರೆದಿರುವ ‘ಒಡಲ ತುಡಿತಕ್ಕೆ ಕೇಡು’ ಕೃತಿಗೆ 2008ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಗಾಳಿ ಗಮಲು’ ಕೃತಿಗೆ 2010ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, 2014ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ದೊರೆತಿವೆ. ಒಡಲ ತುಡಿತಕ್ಕೆ ಕೇಡು ಕೃತಿಯಲ್ಲಿನ ಹೆಣ್ಣು ಭ್ರೂಣ ಹತ್ಯೆ ಕುರಿತ ಸಂಶೋಧನಾ ಲೇಖನವು ದ್ವಿತೀಯ ಪಿಯುಸಿ ಸಮಾಜಶಾಸ್ತ್ರ ಪಠ್ಯ ಪುಸ್ತಕದಲ್ಲಿ ಅಳವಡಿಕೆಯಾಗಿದೆ. ಕನ್ನಡಿ ಕಣ್ಣು (ಕವನ ಸಂಕಲ), ಸಾಮೂದಾಯಿಕ ಭೂಮಿ ಮತ್ತು ಜನಜೀವನ ಸಂಶೋಧನ ಪ್ರಬಂಧ, ಈತರ್ಕೆ-ಈತರ ವ್ಯಕ್ತಿಗಳ ಚಿತ್ರಣ ಕೃತಿಗಳನ್ನು ಬರೆದಿದ್ದಾರೆ.
‘ಕರ್ನಾಟಕದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಪಾತ್ರ’ ಕುರಿತ ಮಹಾಪ್ರಬಂಧಕ್ಕೆ ಮೈಸೂರಿನ ಸಂಗಿತ ಮತ್ತು ಅಭಿನಯ ಕಲೆಗಳ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.ರೈತ,ದಲಿತ,ಪ್ರಗತಿಪರ ಚಳುವಳಿ ಗಳು ಸೇರಿದಂತೆ ಹಲವಾರು ಜನಪರ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…