ಮಂಜುನಾಥ ಅದ್ದೆ ಅವರಿಗೆ ‘ಸುವರ್ಣ ಮಹೋತ್ಸವ ಪ್ರಶಸ್ತಿ’

ದೊಡ್ಡಬಳ್ಳಾಪುರ: ಕರ್ನಾಟಕ ಸಂಭ್ರಮ-50ರ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿಗಳಿಗೆ ನೀಡುತ್ತಿರುವ ‘ಸುವರ್ಣ ಮಹೋತ್ಸವ ಪ್ರಶಸ್ತಿ-2024’ ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ತಾಲ್ಲೂಕಿಗೆ ಸಮೀಪದ ಯಲಹಂಕ ತಾಲ್ಲೂಕಿನ ಅದ್ದೆ ಗ್ರಾಮದ ಡಾ.ಮಂಜುನಾಥ ಅದ್ದೆ ಅವರಿಗೆ ದೊರೆತಿದೆ.

ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ ಅದ್ದೆ ಅವರು ಪತ್ರಕರ್ತರಾಗಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದು, ಇವರು ಬರೆದಿರುವ ‘ಒಡಲ ತುಡಿತಕ್ಕೆ ಕೇಡು’ ಕೃತಿಗೆ 2008ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಗಾಳಿ ಗಮಲು’ ಕೃತಿಗೆ 2010ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, 2014ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ದೊರೆತಿವೆ. ಒಡಲ ತುಡಿತಕ್ಕೆ ಕೇಡು ಕೃತಿಯಲ್ಲಿನ ಹೆಣ್ಣು ಭ್ರೂಣ ಹತ್ಯೆ ಕುರಿತ ಸಂಶೋಧನಾ ಲೇಖನವು ದ್ವಿತೀಯ ಪಿಯುಸಿ ಸಮಾಜಶಾಸ್ತ್ರ ಪಠ್ಯ ಪುಸ್ತಕದಲ್ಲಿ ಅಳವಡಿಕೆಯಾಗಿದೆ. ಕನ್ನಡಿ ಕಣ್ಣು (ಕವನ ಸಂಕಲ), ಸಾಮೂದಾಯಿಕ ಭೂಮಿ ಮತ್ತು ಜನಜೀವನ ಸಂಶೋಧನ ಪ್ರಬಂಧ, ಈತರ್ಕೆ-ಈತರ ವ್ಯಕ್ತಿಗಳ ಚಿತ್ರಣ ಕೃತಿಗಳನ್ನು ಬರೆದಿದ್ದಾರೆ.

‘ಕರ್ನಾಟಕದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಪಾತ್ರ’ ಕುರಿತ ಮಹಾಪ್ರಬಂಧಕ್ಕೆ ಮೈಸೂರಿನ ಸಂಗಿತ ಮತ್ತು ಅಭಿನಯ ಕಲೆಗಳ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.ರೈತ,ದಲಿತ,ಪ್ರಗತಿಪರ ಚಳುವಳಿ ಗಳು ಸೇರಿದಂತೆ ಹಲವಾರು ಜನಪರ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

6 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

6 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

6 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

7 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

8 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

12 hours ago