ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು? ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ಹೇಳಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ತಿಳಿಸಿದ್ದಾರೆ.
ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ, ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.
ಇಂದು ಪ್ರತಿಭಟನೆ ನಡೆಸುವ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ, ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರಿಗೆ ಹೊಡೆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಅವರು ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದಿರುವ ಕಡೆ ಕೋಮು ವಿಷಯಗಳನ್ನು ಮುಂದಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…