ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು? ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ಹೇಳಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ತಿಳಿಸಿದ್ದಾರೆ.
ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ, ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.
ಇಂದು ಪ್ರತಿಭಟನೆ ನಡೆಸುವ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ, ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರಿಗೆ ಹೊಡೆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಅವರು ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದಿರುವ ಕಡೆ ಕೋಮು ವಿಷಯಗಳನ್ನು ಮುಂದಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…