ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು? ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ಹೇಳಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ತಿಳಿಸಿದ್ದಾರೆ.
ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ, ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.
ಇಂದು ಪ್ರತಿಭಟನೆ ನಡೆಸುವ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ, ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರಿಗೆ ಹೊಡೆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಅವರು ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದಿರುವ ಕಡೆ ಕೋಮು ವಿಷಯಗಳನ್ನು ಮುಂದಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…