ಮಕರಜ್ಯೋತಿ ದರ್ಶನ ಪಡೆದು ಪುನೀತರಾದ ಅಯ್ಯಪ್ಪ ಭಕ್ತರು

ಇಂದು ಮಕರಸಂಕ್ರಾಂತಿ ಶುಭದಿನದಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಸಹಸ್ರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿ ದರ್ಶನ ಪಡೆದು ಪುನೀತರಾದರು. ಪೊನ್ನಂಬಲ ಬೆಟ್ಟದ ಮೇಲಿನಿಂದ ಮಕರ ಜ್ಯೋತಿ ಮೂರು ಬಾರಿ ಜ್ಯೋತಿ ದರ್ಶನವಾಗಿದ್ದು, ಮಕರವಿಳಕ್ಕು ದರ್ಶನವಾಗುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಮಯಪ್ಪ ಘೋಷಣೆ ಮೊಳಗಿಸಿ ಭಕ್ತಿಯಲ್ಲಿ ಮಿಂದೆದ್ದರು.

ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಅಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

Leave a Reply

Your email address will not be published. Required fields are marked *