ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್ ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.
ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…