ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್ ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.
ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…