ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್ ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.
ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…