ಮಕ್ಕಳಲ್ಲಿನ ಪ್ರತಿಭೆ ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ-ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್

ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್  ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.

ನಗರದ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್  ಶಾಲೆಯಲ್ಲಿ ಶನಿವಾರ ನಡೆದ ವಿಜ್ಞಾನ, ಗಣಿತ ಮೇಳ (ಅನ್ವೇಷಣಾ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಬಗ್ಗೆ ಕುತೂಹಲ ಮೂಡಿಸುವಲ್ಲಿ ಹಾಗೂ ಅನುಭವದ ಜೊತೆಗೆ ವಿಜ್ಞಾನ ಕಲಿಯುವ ನಿಟ್ಟಿನಲ್ಲಿ ವಿಜ್ಞಾನ ಮೇಳವು ಯಶಸ್ವಿಯಾಗಿದೆ ಎಂದು ಶಾಲೆಯ ಆಡಳಿತ ಕಾರ್ಯದರ್ಶಿ ಲೋಕೇಶ್ ಕುಮಾರ್ ಹೇಳಿದರು.

ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ  ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.

ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

17 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago