ಅನ್ವೇಷಣಾ ಹೆಸರಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಳೆದ ಹದಿನೈದು ದಿನಗಳಿಂದ ಶ್ರಮವಹಿಸಲಾಗಿದೆ. ವಿವಿಧ ಪ್ರಾಣಿಗಳ ಪಕ್ಷಿಗಳ ಪರಿಚಯ, ಮೆಡಿಕಲ್ ಪ್ಲಾಂಟ್ಸ್ ಗಳ ಉಪಯೋಗ, ಫನ್ ಸೈನ್ಸ್, ಮೆಥಮೆಟಿಕಲ್ ಲ್ಯಾಬ್, ಸೋಲಾರ್ ಪ್ಯಾನಲ್, ರೋಬೋಟಿಕ್, ಸ್ಮಾರ್ಟ್ ಸಿಟಿ, ಮನುಷ್ಯ ಅಂಗಾಂಗ ಪರಿಚಯ, ಭೂತದ ಮನೆ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಮಕ್ಕಳ ಪೊಷಕರು, ಸಾರ್ವಜನಿಕರು ಭಾಗಿಯಾಗಿ ಮಕ್ಕಳಿಂದ ತಯಾರಿಸಲ್ಪಟ್ಟ ವಿಜ್ಞಾನ ಮತ್ತು ಗಣಿತ ಕಲಾಕೃತಿಗಳನ್ನು ಕಣ್ತುಂಬಿಕೊಂಡರು ಎಂದು ಗುರುಕುಲ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ಅನ್ವೇಷಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ಅನ್ವೇಷಣಾ ಕಾರ್ಯಕ್ರಮ ವೇದಿಕೆಯಾಯಿತು ಎಂದರು.
ಈ ವೇಳೆ ಶಾಲೆಯ ಪ್ರಾಂಶುಪಾಲ, ಉಪಪ್ರಾಂಶುಪಾಲ, ವಿಜ್ಞಾನ ಶಿಕ್ಷಕಿ, ಸಹಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…