ಮಕ್ಕಳಲ್ಲಿ ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಸಹಕಾರಿ- ಎಸ್ ಎಲ್ ಆರ್ ಎಸ್ ಶಾಲಾ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿಕೆ

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಎಸ್ ಎಲ್ ಆರ್ ಎಸ್ ಶಾಲೆಯ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಆಯೋಜನೆ ಮಾಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಮಕ್ಕಳು ಈ ಪ್ರತಿಭೆಯನ್ನು ಇನ್ನು ಮುಂದೆ ನಮ್ಮ ಶಾಲೆಯಲ್ಲಿ ಮಾತ್ರವಲ್ಲದೇ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಬೇಕು. ಇದಕ್ಕೆ ಶಾಲಾ ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌, ಸೋಲಾರ್ ಪ್ಯಾನಲ್, ಕಲಾ ಮತ್ತು ವಿಜ್ಞಾನ ಮಾದರಿಗಳು‌ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳು ನೋಡುಗರ ಕಣ್ಮನ‌ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಹರಿತಾ ರಮೇಶ್, ಶಾಲೆಯ ಸದಸ್ಯ ರಾಹುಲ್, ಮುಖ್ಯ ಶಿಕ್ಷಕ ಎನ್.ಎನ್.ನಾಗರಾಜ್ ಹಾಗೂ ಶಾಲೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

6 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

7 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

8 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

10 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

17 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

17 hours ago