ಮಕ್ಕಳಲ್ಲಿ ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಸಹಕಾರಿ- ಎಸ್ ಎಲ್ ಆರ್ ಎಸ್ ಶಾಲಾ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿಕೆ

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಎಸ್ ಎಲ್ ಆರ್ ಎಸ್ ಶಾಲೆಯ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಆಯೋಜನೆ ಮಾಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಮಕ್ಕಳು ಈ ಪ್ರತಿಭೆಯನ್ನು ಇನ್ನು ಮುಂದೆ ನಮ್ಮ ಶಾಲೆಯಲ್ಲಿ ಮಾತ್ರವಲ್ಲದೇ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಬೇಕು. ಇದಕ್ಕೆ ಶಾಲಾ ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌, ಸೋಲಾರ್ ಪ್ಯಾನಲ್, ಕಲಾ ಮತ್ತು ವಿಜ್ಞಾನ ಮಾದರಿಗಳು‌ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳು ನೋಡುಗರ ಕಣ್ಮನ‌ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಹರಿತಾ ರಮೇಶ್, ಶಾಲೆಯ ಸದಸ್ಯ ರಾಹುಲ್, ಮುಖ್ಯ ಶಿಕ್ಷಕ ಎನ್.ಎನ್.ನಾಗರಾಜ್ ಹಾಗೂ ಶಾಲೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

18 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago