ಮಕ್ಕಳಲ್ಲಿ ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಸಹಕಾರಿ- ಎಸ್ ಎಲ್ ಆರ್ ಎಸ್ ಶಾಲಾ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿಕೆ

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಎಸ್ ಎಲ್ ಆರ್ ಎಸ್ ಶಾಲೆಯ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಆಯೋಜನೆ ಮಾಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಮಕ್ಕಳು ಈ ಪ್ರತಿಭೆಯನ್ನು ಇನ್ನು ಮುಂದೆ ನಮ್ಮ ಶಾಲೆಯಲ್ಲಿ ಮಾತ್ರವಲ್ಲದೇ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಬೇಕು. ಇದಕ್ಕೆ ಶಾಲಾ ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌, ಸೋಲಾರ್ ಪ್ಯಾನಲ್, ಕಲಾ ಮತ್ತು ವಿಜ್ಞಾನ ಮಾದರಿಗಳು‌ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳು ನೋಡುಗರ ಕಣ್ಮನ‌ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಹರಿತಾ ರಮೇಶ್, ಶಾಲೆಯ ಸದಸ್ಯ ರಾಹುಲ್, ಮುಖ್ಯ ಶಿಕ್ಷಕ ಎನ್.ಎನ್.ನಾಗರಾಜ್ ಹಾಗೂ ಶಾಲೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

10 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

13 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago