ಮಕ್ಕಳಲ್ಲಿ ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಸಹಕಾರಿ- ಎಸ್ ಎಲ್ ಆರ್ ಎಸ್ ಶಾಲಾ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿಕೆ

ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು, ವಿಜ್ಞಾನ ಮತ್ತು ಗಣಿತದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು, ಪ್ರಾಯೋಗಿಕ ಜ್ಞಾನ ವೃದ್ಧಿಸಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಎಸ್ ಎಲ್ ಆರ್ ಎಸ್ ಶಾಲೆಯ ಕಾರ್ಯದರ್ಶಿ ಎಸ್.ಆರ್.ರಮೇಶ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಆಯೋಜನೆ ಮಾಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಸುತ್ತಾಮುತ್ತಾ ಸಿಗುವ ವಸ್ತುಗಳನ್ನು ಬಳಸಿಕೊಂಡು ಸ್ವತಃ ಮಕ್ಕಳೆ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪ್ರಾಯೋಗಿಕತೆ, ರಾಕೆಟ್ ಉಡಾವಣೆ, ಮಳೆ ನೀರು ಕೊಯ್ಲು, ಹೃದಯ, ರಕ್ತ ಪರಿಚಲನೆ, ಬಿಪಿ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲವನ್ನು ಮಕ್ಕಳೇ ಮಾಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಮಕ್ಕಳು ಈ ಪ್ರತಿಭೆಯನ್ನು ಇನ್ನು ಮುಂದೆ ನಮ್ಮ ಶಾಲೆಯಲ್ಲಿ ಮಾತ್ರವಲ್ಲದೇ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಬೇಕು. ಇದಕ್ಕೆ ಶಾಲಾ ಆಡಳಿತ ಮಂಡಳಿ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌, ಸೋಲಾರ್ ಪ್ಯಾನಲ್, ಕಲಾ ಮತ್ತು ವಿಜ್ಞಾನ ಮಾದರಿಗಳು‌ ಸೇರಿದಂತೆ ವಿವಿಧ ಪ್ರಯೋಗಗಳ ಕಲಾಕೃತಿಗಳು ನೋಡುಗರ ಕಣ್ಮನ‌ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಹರಿತಾ ರಮೇಶ್, ಶಾಲೆಯ ಸದಸ್ಯ ರಾಹುಲ್, ಮುಖ್ಯ ಶಿಕ್ಷಕ ಎನ್.ಎನ್.ನಾಗರಾಜ್ ಹಾಗೂ ಶಾಲೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

2 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

5 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

18 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

24 hours ago