ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಶಾಲೆಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿದ ಅವರು 2023-24 ನೇ ಸಾಲಿನ ಶಾಲಾ ಆರಂಭದ ದಿನ ಮಕ್ಕಳನ್ನು ಸ್ವಾಗತಿಸಿ, ಎಲ್ಲಾ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು.
ನೆರೆಹೊರೆಯಲ್ಲಿ ಯಾರಾದರೂ ಶಿಕ್ಷಣ ವಂಚಿತ ಮಕ್ಕಳು ಕಂಡುಬಂದಲ್ಲಿ ನಿಮ್ಮ ಸ್ನೇಹಿತರೆಂದು ತಿಳಿದು ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಮಕ್ಕಳನ್ನು ಪ್ರೇರೇಪಿಸಿದರು ಹಾಗೂ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಶಿಕ್ಷಕರ, ಪೋಷಕರ ಸಹಕಾರ ಅಗತ್ಯ ಎಂದರು.
ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗದಂತೆ ಶಾಲಾ ಮಕ್ಕಳಿಗೆ ಆರಂಭದಲ್ಲಿ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಶೀಘ್ರ ಕ್ರಮ ವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ನಂತರ ಸಚಿವರು ಬಸವನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಉಚಿತ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಿಸಿ ಮಕ್ಕಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಕಂಠ.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಬಿ.ಇ.ಒ ಸುಮಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…