ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಶಾಲೆಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿದ ಅವರು 2023-24 ನೇ ಸಾಲಿನ ಶಾಲಾ ಆರಂಭದ ದಿನ ಮಕ್ಕಳನ್ನು ಸ್ವಾಗತಿಸಿ, ಎಲ್ಲಾ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು.
ನೆರೆಹೊರೆಯಲ್ಲಿ ಯಾರಾದರೂ ಶಿಕ್ಷಣ ವಂಚಿತ ಮಕ್ಕಳು ಕಂಡುಬಂದಲ್ಲಿ ನಿಮ್ಮ ಸ್ನೇಹಿತರೆಂದು ತಿಳಿದು ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಮಕ್ಕಳನ್ನು ಪ್ರೇರೇಪಿಸಿದರು ಹಾಗೂ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಶಿಕ್ಷಕರ, ಪೋಷಕರ ಸಹಕಾರ ಅಗತ್ಯ ಎಂದರು.
ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗದಂತೆ ಶಾಲಾ ಮಕ್ಕಳಿಗೆ ಆರಂಭದಲ್ಲಿ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಶೀಘ್ರ ಕ್ರಮ ವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ನಂತರ ಸಚಿವರು ಬಸವನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಉಚಿತ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಿಸಿ ಮಕ್ಕಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಕಂಠ.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಬಿ.ಇ.ಒ ಸುಮಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…