ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್ಶೀಟ್ಗಳು, ಹಾಸ್ಟೆಲ್ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ.
ಇವುಗಳ ಜತೆಗೆ, ₹13 ಲಕ್ಷ ಮೌಲ್ಯದ ಆರು ನಿವೇಶನಗಳು, ₹45 ಲಕ್ಷ ಮೌಲ್ಯದ ಮನೆ, ₹80.77 ಲಕ್ಷ ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು ₹1.38 ಕೋಟಿ ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.
₹89 ಸಾವಿರ ನಗದು, ₹23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, ₹2.05 ಲಕ್ಷ ಮೌಲ್ಯದ ಬೆಳ್ಳಿ, ₹31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…