ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್ಶೀಟ್ಗಳು, ಹಾಸ್ಟೆಲ್ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ.
ಇವುಗಳ ಜತೆಗೆ, ₹13 ಲಕ್ಷ ಮೌಲ್ಯದ ಆರು ನಿವೇಶನಗಳು, ₹45 ಲಕ್ಷ ಮೌಲ್ಯದ ಮನೆ, ₹80.77 ಲಕ್ಷ ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು ₹1.38 ಕೋಟಿ ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.
₹89 ಸಾವಿರ ನಗದು, ₹23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, ₹2.05 ಲಕ್ಷ ಮೌಲ್ಯದ ಬೆಳ್ಳಿ, ₹31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…