ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago