ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago