ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

3 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

4 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

17 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

18 hours ago