ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago