ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ್ನು ಹೆಚ್ಚು ಘಟಕಗಳನ್ನು ತೆರೆಯುವ ಮೂಲಕ ಸಂಘಟನೆಯ ಆಶಯಗಳನ್ನು ನೆರವೇರಿಸಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕರೆ ನೀಡಿದರು.

ನಗರದ ಹೊರವಲಯದ ಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಕಾರಿಗಳು, ಸಿಆರ್ ಸಿ, ಬಿಆರ್ ಸಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಒಂದು ದಿನದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು. ಆದರೆ, ಇಂದು ವ್ಯವಸ್ಥೆಯ ಬಗ್ಗೆ ತೀವ್ರ ಬೇಸರವಿದೆ. ಮಕ್ಕಳನ್ನು ವ್ಯವಸ್ಥಿತವಾಗಿ ಬೆಳೆಸುತ್ತಿಲ್ಲ. ಅವರಿಗೆ ಪರಿಸರ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುತ್ತಿಲ್ಲ. ತತ್ವಜ್ಞಾನಿ ಸಾಕ್ರೆಟಿಸ್ ಅವರು ಪ್ರಜಾಪ್ರಭುತ್ವದ ಋಣಾತ್ಮಕ ಅಂಶಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದರು. ಇಂದು ಸೋವಿಯತ್ ಒಕ್ಕೂಟ ಒಡೆದು ಚೂರಾಗಿದೆ. ಉಕ್ರೇನ್ ಮೇಲಿನ ಯುದ್ದ ಕರಾಳ ಅಧ್ಯಾಯವಾಗಿದ್ದು, ಇದನ್ನ ತಡೆಯುವಲ್ಲಿ ವಿಶ್ವ ಸಂಸ್ಥೆ ಸಹ ವಿಫಲವಾಗಿದೆ ಎಂದರು.

ನಮ್ಮ ಪರಿಸರ ಕಲುಷಿತವಾಗುತ್ತಿದ್ದು, ಇದನ್ನು ಉಳಿಸಿಕೊಳ್ಳಬೇಕು. ಗಿಡ ಮರಗಳನ್ನು ಬೆಳೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಅಳವಡಿಸಿಕೊಂಡರೆ ಅವರ ಮುಂದಿನ ಜೀವನ ಶಿಸ್ತು ಬದ್ಧವಾಗಿ, ಉತ್ತಮವಾಗಿರಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್  ಧ್ಯೇಯೋದ್ದೇಶಗಳಾದ ದೇಶ ಪ್ರೇಮ, ಪರಿಸರ ಕಾಳಜಿ, ಸರ್ವ ಧರ್ಮ ಸಮನ್ವತೆಗಳನ್ನು ಇಂದಿನ ಮಕ್ಕಳಿಗೆ ತುಂಬಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ  ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಪ್ರಮುಖ ಸಂಗತಿಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದ್ದು, ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಮೀಸಲಿಟ್ಟು, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಪಿಸಿ ಯೋಜನಾಧಿಕಾರಿ ಕೆಂಪಯ್ಯ,  ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ, ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್, ತರಬೇತುದಾರ, ಚಿನ್ನಸ್ವಾಮಿ ರೆಡ್ಡಿ, ಸಹಾಯಕ ಆಯುಕ್ತ ವೆಂಕಟರಾಜು, ಅರುಣಾ, ಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

4 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

5 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

15 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

15 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

18 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

21 hours ago