ಕೋಲಾರ: ಪೋಷಕರು ತಮ್ಮ ಮಕ್ಕಳಲ್ಲಿ ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಪ್ರಾರಂಭಿಕ ಹಂತದಲ್ಲಿನ ಇಂತಹ ಪ್ಲೇ ಹೋಂ ಶಾಲೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಸಾಯಿ ಬಾಬಾ ಮಂದಿರದಲ್ಲಿ ಶನಿವಾರ ಅಕ್ಷರ ಪ್ಲೇ ಹೋಂ ಶಾಲೆಯ ಎರಡನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದ ಮೂಲ ಆಶಯಗಳನ್ನು ಆಟಪಾಠಗಳೊಂದಿಗೆ ಇಂತಹ ಶಾಲೆಗಳು ಕಲಿಸಿಕೊಡುತ್ತವೆ ಪೋಷಕರು ತಮ್ಮ ಕೆಲಸಗಳ ಒತ್ತಡದ ಮಧ್ಯೆ ಶಾಲೆಗೆ ಸೇರಿಸಿದರೆ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಮಹತ್ವ, ಅರಿವು ಹಾಗೂ ಮುಂದಿನ ಭವಿಷ್ಯದ ಕಣ್ಣೋಟ ತಿಳಿಸಲು ಸಾಧ್ಯವಾಗುತ್ತದೆ ಎಂದರು.
ಇವತ್ತು ಸಮಾಜದಲ್ಲಿ ಬರೀ ಹಣ ಸಂಪಾದನೆಗೆ ಎನ್ನುವ ಪ್ರವೃತ್ತಿ ದೂರವಾಗಿ ಒಳ್ಳೆಯ ಮೌಲ್ಯಯುತವಾದ ಶಿಕ್ಷಣ ಅವಶ್ಯಕತೆಯ ಬಗ್ಗೆ ಯೋಚಿಸಬೇಕಾಗಿದೆ ಮಕ್ಕಳಿಗೆ ದೇಶ, ಧರ್ಮ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಕಾಳಜಿ ತರಬೇಕಾಗಿದೆ ಉತ್ತಮ ಪ್ರಜೆಯಾಂತೆ ಪ್ರತಿಯೊಬ್ಬರೂ ಭಾರತದಲ್ಲಿ ಇದ್ದೇವೆ ಎಂಬುದನ್ನು ಅರಿತು ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ್ ಹಂಸ ಮರೀಯಾ ಮಾತನಾಡಿ ಇಂತಹ ಶಾಲೆಗಳಿಂದ ಮಕ್ಕಳಿಗೆ ಮೊದಲು ಆಟ ನಂತರ ಪಾಠ ಎನ್ನುವ ಮನಸ್ಥಿತಿ ಬರುತ್ತದೆ ತಂದೆ ತಾಯಿಗೆ ಮಕ್ಕಳ ಚಿಂತೆ ದೂರವಾಗುತ್ತದೆ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಕಲಿಸುವಂತೆ ಶಿಕ್ಷಣದ ಪ್ರಾರಂಭದಲ್ಲೇ ಸಾಧ್ಯವಾದರೆ ಮುಂದೆ ಉತ್ತಮ ಮಕ್ಕಳಾಗಿ ಬೆಳೆಯಲು ಕೂಡ ಸಾಧ್ಯವಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಶಿಕ್ಷಕಿ ಪುಷ್ಪ ಓಂಶಕ್ತಿ ಚಲಪತಿ, ಅಕ್ಷರ ಪ್ಲೇ ಹೋಂ ಶಾಲೆಯ ಪ್ರಾಂಶುಪಾಲರಾದ ಶ್ರೀಲತಾ , ವಕೀಲ ರಘು, ಶಾಲೆಯ ಸುಭದ್ರಮ್ಮ, ಭರತ್ ಮುಂತಾದವರು ಇದ್ದರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…