Categories: ಕೋಲಾರ

ಮಕ್ಕಳಿಗೆ ಭವಿಷ್ಯ ರೂಪಿಸಲು ಪ್ಲೇ ಹೋಂ ಶಾಲೆಗಳು ಸಹಕಾರಿ: ಓಂಶಕ್ತಿ ಚಲಪತಿ

ಕೋಲಾರ: ಪೋಷಕರು ತಮ್ಮ ಮಕ್ಕಳಲ್ಲಿ ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಪ್ರಾರಂಭಿಕ ಹಂತದಲ್ಲಿನ ಇಂತಹ ಪ್ಲೇ ಹೋಂ ಶಾಲೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಸಾಯಿ ಬಾಬಾ ಮಂದಿರದಲ್ಲಿ ಶನಿವಾರ ಅಕ್ಷರ ಪ್ಲೇ ಹೋಂ ಶಾಲೆಯ ಎರಡನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದ ಮೂಲ ಆಶಯಗಳನ್ನು ಆಟಪಾಠಗಳೊಂದಿಗೆ ಇಂತಹ ಶಾಲೆಗಳು ಕಲಿಸಿಕೊಡುತ್ತವೆ ಪೋಷಕರು ತಮ್ಮ ಕೆಲಸಗಳ ಒತ್ತಡದ ಮಧ್ಯೆ ಶಾಲೆಗೆ ಸೇರಿಸಿದರೆ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಮಹತ್ವ, ಅರಿವು ಹಾಗೂ ಮುಂದಿನ ಭವಿಷ್ಯದ ಕಣ್ಣೋಟ ತಿಳಿಸಲು ಸಾಧ್ಯವಾಗುತ್ತದೆ ಎಂದರು.

ಇವತ್ತು ಸಮಾಜದಲ್ಲಿ ಬರೀ ಹಣ ಸಂಪಾದನೆಗೆ ಎನ್ನುವ ಪ್ರವೃತ್ತಿ ದೂರವಾಗಿ ಒಳ್ಳೆಯ ಮೌಲ್ಯಯುತವಾದ ಶಿಕ್ಷಣ ಅವಶ್ಯಕತೆಯ ಬಗ್ಗೆ ಯೋಚಿಸಬೇಕಾಗಿದೆ ಮಕ್ಕಳಿಗೆ ದೇಶ, ಧರ್ಮ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಕಾಳಜಿ ತರಬೇಕಾಗಿದೆ ಉತ್ತಮ ಪ್ರಜೆಯಾಂತೆ ಪ್ರತಿಯೊಬ್ಬರೂ ಭಾರತದಲ್ಲಿ ಇದ್ದೇವೆ ಎಂಬುದನ್ನು ಅರಿತು ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ್ ಹಂಸ ಮರೀಯಾ ಮಾತನಾಡಿ ಇಂತಹ ಶಾಲೆಗಳಿಂದ ಮಕ್ಕಳಿಗೆ ಮೊದಲು ಆಟ ನಂತರ ಪಾಠ ಎನ್ನುವ ಮನಸ್ಥಿತಿ ಬರುತ್ತದೆ ತಂದೆ ತಾಯಿಗೆ ಮಕ್ಕಳ ಚಿಂತೆ ದೂರವಾಗುತ್ತದೆ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಕಲಿಸುವಂತೆ ಶಿಕ್ಷಣದ ಪ್ರಾರಂಭದಲ್ಲೇ ಸಾಧ್ಯವಾದರೆ ಮುಂದೆ ಉತ್ತಮ ಮಕ್ಕಳಾಗಿ ಬೆಳೆಯಲು ಕೂಡ ಸಾಧ್ಯವಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಶಿಕ್ಷಕಿ ಪುಷ್ಪ ಓಂಶಕ್ತಿ ಚಲಪತಿ, ಅಕ್ಷರ ಪ್ಲೇ ಹೋಂ ಶಾಲೆಯ ಪ್ರಾಂಶುಪಾಲರಾದ ಶ್ರೀಲತಾ , ವಕೀಲ ರಘು, ಶಾಲೆಯ ಸುಭದ್ರಮ್ಮ, ಭರತ್ ಮುಂತಾದವರು ಇದ್ದರು

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

45 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

58 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago