Categories: ಕೋಲಾರ

ಮಕ್ಕಳಿಗೆ ಭವಿಷ್ಯ ರೂಪಿಸಲು ಪ್ಲೇ ಹೋಂ ಶಾಲೆಗಳು ಸಹಕಾರಿ: ಓಂಶಕ್ತಿ ಚಲಪತಿ

ಕೋಲಾರ: ಪೋಷಕರು ತಮ್ಮ ಮಕ್ಕಳಲ್ಲಿ ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಪ್ರಾರಂಭಿಕ ಹಂತದಲ್ಲಿನ ಇಂತಹ ಪ್ಲೇ ಹೋಂ ಶಾಲೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಸಾಯಿ ಬಾಬಾ ಮಂದಿರದಲ್ಲಿ ಶನಿವಾರ ಅಕ್ಷರ ಪ್ಲೇ ಹೋಂ ಶಾಲೆಯ ಎರಡನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದ ಮೂಲ ಆಶಯಗಳನ್ನು ಆಟಪಾಠಗಳೊಂದಿಗೆ ಇಂತಹ ಶಾಲೆಗಳು ಕಲಿಸಿಕೊಡುತ್ತವೆ ಪೋಷಕರು ತಮ್ಮ ಕೆಲಸಗಳ ಒತ್ತಡದ ಮಧ್ಯೆ ಶಾಲೆಗೆ ಸೇರಿಸಿದರೆ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಮಹತ್ವ, ಅರಿವು ಹಾಗೂ ಮುಂದಿನ ಭವಿಷ್ಯದ ಕಣ್ಣೋಟ ತಿಳಿಸಲು ಸಾಧ್ಯವಾಗುತ್ತದೆ ಎಂದರು.

ಇವತ್ತು ಸಮಾಜದಲ್ಲಿ ಬರೀ ಹಣ ಸಂಪಾದನೆಗೆ ಎನ್ನುವ ಪ್ರವೃತ್ತಿ ದೂರವಾಗಿ ಒಳ್ಳೆಯ ಮೌಲ್ಯಯುತವಾದ ಶಿಕ್ಷಣ ಅವಶ್ಯಕತೆಯ ಬಗ್ಗೆ ಯೋಚಿಸಬೇಕಾಗಿದೆ ಮಕ್ಕಳಿಗೆ ದೇಶ, ಧರ್ಮ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಕಾಳಜಿ ತರಬೇಕಾಗಿದೆ ಉತ್ತಮ ಪ್ರಜೆಯಾಂತೆ ಪ್ರತಿಯೊಬ್ಬರೂ ಭಾರತದಲ್ಲಿ ಇದ್ದೇವೆ ಎಂಬುದನ್ನು ಅರಿತು ಬದುಕನ್ನು ರೂಪಿಸಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ್ ಹಂಸ ಮರೀಯಾ ಮಾತನಾಡಿ ಇಂತಹ ಶಾಲೆಗಳಿಂದ ಮಕ್ಕಳಿಗೆ ಮೊದಲು ಆಟ ನಂತರ ಪಾಠ ಎನ್ನುವ ಮನಸ್ಥಿತಿ ಬರುತ್ತದೆ ತಂದೆ ತಾಯಿಗೆ ಮಕ್ಕಳ ಚಿಂತೆ ದೂರವಾಗುತ್ತದೆ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಕಲಿಸುವಂತೆ ಶಿಕ್ಷಣದ ಪ್ರಾರಂಭದಲ್ಲೇ ಸಾಧ್ಯವಾದರೆ ಮುಂದೆ ಉತ್ತಮ ಮಕ್ಕಳಾಗಿ ಬೆಳೆಯಲು ಕೂಡ ಸಾಧ್ಯವಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಶಿಕ್ಷಕಿ ಪುಷ್ಪ ಓಂಶಕ್ತಿ ಚಲಪತಿ, ಅಕ್ಷರ ಪ್ಲೇ ಹೋಂ ಶಾಲೆಯ ಪ್ರಾಂಶುಪಾಲರಾದ ಶ್ರೀಲತಾ , ವಕೀಲ ರಘು, ಶಾಲೆಯ ಸುಭದ್ರಮ್ಮ, ಭರತ್ ಮುಂತಾದವರು ಇದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago