ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…