ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…