ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…