ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…