ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…